ಮಂಗಳೂರಿನಲ್ಲಿ ಬಾಂಬ್ ಪತ್ತೆ: ಜಿಲ್ಲೆಯಲ್ಲಿ ಕಟ್ಟೆಚ್ಚರ, ಎಸ್‌ಪಿ ವೇದಮೂರ್ತಿ ಅವರ ನೇತೃತ್ವದಲ್ಲಿ ರೈಲ್ವೆ, ಬಸ್‌ನಿಲ್ದಾಣ ಪರಿಶೀಲನೆ

0
218
??????

ರಾಯಚೂರು,ಜ.20- ರಾಜ್ಯದ ಮಂಗಳೂರು ಜಿಲ್ಲೆಯಲ್ಲಿ ಬಾಂಬ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪ್ರಮುಖ ಜನದಟ್ಟನೆಯ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರ ಚಲನವಲನಗಳ ಮೇಲೆ ನಿಗಾವಹಿಸಲಾಗಿದೆ.

ಜ.20ರ ಸೋಮವಾರದಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರ ನೇತೃತ್ವದಲ್ಲಿ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಶ್ವಾನ ದಳ ಮತ್ತು ಬಾಂಬ್ ನಿಷ್ಕಿçಯದಳದೊಂದಿಗೆ ಆಗಮಿಸಿ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರಂ ಮತ್ತು ಸುತ್ತಮುತ್ತ ಸ್ಥಳಗಳನ್ನು ಪರಿಶೀಲಿನೆ ನಡೆಸಿದರು.
ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್‌ವೊಂದರಲ್ಲಿ ಬಾಂಬ್ ಪತ್ತೆಯಾದ ಕಾರಣ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬಸ್‌ನಿಲ್ದಾಣ, ರೈಲ್ವೆ ನಿಲ್ದಾಣ, ಆರ್‌ಟಿಪಿಎಸ್, ವೈಟಿಪಿಎಸ್, ಹಟ್ಟಿಚಿನ್ನದ ಗಣಿ ಮತ್ತು ಬಸವಸಾಗರ ಡ್ಯಾಂಮ್‌ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅವರನ್ನು ಬಂದಿಸಿ ವಿಚಾರಣೆಗೆ ಒಳಪಡಿಸಲಾಗುತ್ತದೆ. ಬಸ್‌ನಿಲ್ದಾಣದಲ್ಲಿ ಪ್ರಯಾಣಿಕರ ಬ್ಯಾಗ್ ಮತ್ತು ಬಸ್‌ಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸದರ್ ಬಜಾರ್ ಪೊಲೀಸ್ ಠಾಣೆ ಪಿಎಸ್‌ಐ ಉಮೇಶ್ ಕಾಂಬ್ಳೆ ಹಾಗೂ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ತಂಡ ಉಪಸ್ಥಿತದ್ದರು.

LEAVE A REPLY

Please enter your comment!
Please enter your name here