ಚಿಂತಕ ಗವಿಸಿದ್ದಪ್ಪ ಕಾನಿಹಾಳ ಇವರಿಗೆ ಪಿತೃವಿಯೋಗ

0
258

ಸಿಂಧನೂರು: ಚಿಂತಕ ಗವಿಸಿದ್ದಪ್ಪ ಕಾನಿಹಾಳ ಅವರ ತಂದೆ ಶಿವಬಸಣ್ಣ ಹೊಸಮನಿ (75) ಸಾ.ಕಾನಿಹಾಳ ಅವರು ಬುಧವಾರ ರಾತ್ರಿ 9 ಗಂಟೆಗೆ ನಿಧನರಾಗಿದ್ದಾರೆ.
ಮೃತರಿಗೆ ಪುತ್ರ ಚಿಂತಕರು ಗವಿಸಿದ್ದಪ್ಪ ಕಾನಿಹಾಳ ಸೇರಿದಂತೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ. ಮೃತರು ತಮ್ಮ ಜೀವಿತಾವಧಿಯಲ್ಲಿ ಅನೇಕ ಧಾರ್ಮಿಕ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡಿದ್ದಾರೆ.

ಅಂತ್ಯಕ್ರಿಯೆ: ಮೃತರ ಅಂತ್ಯಕ್ರಿಯೆಯು ದಿನಾಂಕ ಫೆ.20ರ ಗುರುವಾರದಂದು ಕಾನಿಹಾಳ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ

ಸಂತಾಪ: ಮೃತರ ನಿಧನಕ್ಕೆ ಶಾಸಕ ವೆಂಕಟರಾವ್ ನಾಡಗೌಡ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ‌ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ, ಪ್ರತಾಪಗೌಡ ಪಾಟೀಲ್,  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ, ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ, ಕಾಡಾ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ, ಜಿಲ್ಲಾ ಪಂಚಾಯತಿ ಸದಸ್ಯರಾದ ಎನ್.ಶಿವನಗೌಡ ಗೊರೇಬಾಳ, ಅಮರೇಗೌಡ ವಿರುಪಾಪೂರ, ರೂಪಾ ಸಿದ್ದನಗೌಡ ತುರ್ವಿಹಾಳ, ಕೆಪಿಸಿಸಿ ಎಸ್ಟಿ ಘಟಕದ ಕಾರ್ಯದರ್ಶಿ ವೆಂಕಟೇಶ ನಾಯಕ್ ರಾಗಲಪರ್ವಿ, ಯುವ ಕಾಂಗ್ರೆಸ್ ತಾಲ್ಲೂಕಾಧ್ಯಕ್ಷ ಖಾಜಾಹುಸೇನ್ ರೌಡಕುಂಡಾ, ಮಸ್ಕಿ ಯುವ ಕಾಂಗ್ರೆಸ್ ನ ಗ್ರಾಮೀಣ ಘಟಕದ ಅಧ್ಯಕ್ಷ ಹನುಮೇಶ ಬಾಗೋಡಿ, ನಗರ ಘಟಕದ ಅಧ್ಯಕ್ಷ ಹುಸೇನ್ ಭಾಷಾ ಬೂದಗುಂಪಾ, ಹಿರಿಯ ಪತ್ರಕರ್ತ ಎಂ.ವೀರಭದ್ರಪ್ಪ ಜವಳಗೇರಾ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here