ಶಿವಮೊಗ್ಗ ಪ್ರೆಸ್ ಟ್ರಸ್ಟ್ ಪತ್ರಿಕಾ ಭವನ ಮುಂದುವರಿದ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ

0
155

ಶಿವಮೊಗ್ಗ ಪ್ರೆಸ್ ಟ್ರಸ್ಟ್ ಪತ್ರಿಕಾ ಭವನ ಮುಂದುವರಿದ ಕಾಮಗಾರಿಗೆ ಮುಖ್ಯಮಂತ್ರಿ ಚಾಲನೆ

ಶಿವಮೊಗ್ಗ:ಅ 25; ನಗರದ ಪತ್ರಕರ್ತರಿಗಾಗಿ ಆರಂಭಿಸಿದ ಟ್ರಸ್ಟ್ ಬೆಳವಣಿಗೆ ನೋಡಿ ಖುಷಿಯಾಗಿದೆ. ಮುಂದೆಯೂ ಸಹ ನಗರದ ಪತ್ರಕರ್ತರಿಗಾಗಿ ಅಗತ್ಯ ನೆರವು ನೀಡಲು ಸದಾ ಸಿದ್ದ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದ ರಾಜ್ಯ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಅವರು ಶಿವಮೊಗ್ಗ ಪ್ರೆಸ್ ಟ್ರಸ್ಟ್ ನ ಪತ್ರಿಕಾ ಭವನದ ಮುಂದುವರಿದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿಯೂ ಸಹ ವಿಮಾನಗಳು ಇಳಿಯುವಂತಾಗಲು ಹೆಚ್ಚುವರಿಯಾಗಿ 75 ಕೋಟಿ ಅನುದಾನ ನೀಡುತ್ತಿರುವುದಾಗಿ ಹೇಳಿದರು.

ಸಂಸದ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ಶಿವಮೊಗ್ಗ ಅಭಿವೃದ್ಧಿಗೆ ಪತ್ರಕರ್ತರ ಸಹಕಾರ ಅಪರೂಪ ಎಂದರು.
ಇದೇ ಸಂದರ್ಭದಲ್ಲಿ ಅವರು ತಂದೆ ಯಡಿಯೂರಪ್ಪ ಅವರ ಮೇಲೆ ದಶಕಗಳ ಹಿಂದೆ ಹಲ್ಲೆ ನಡೆದ ಘಟನೆಯನ್ನು ನೆನಪಿಸಿಕೊಂಡು ಭಾವುಕರಾಗಿ ಮಾತನಾಡಿದರು. ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು.
ಕೆ.ಎಚ್.ಬಿ. ಅಧ್ಯಕ್ಷ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಶಾಸಕ ಆಯನೂರು ಮಂಜುನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಕುಮಾರ್, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಮಹಾನಗರ ಪಾಲಿಕೆ ಅಧ್ಯಕ್ಷೆ ಸುವರ್ಣ ಶಂಕರ್, ಉಪ ಮೇಯರ್ ಸುರೇಖ ಮುರಳೀಧರ್, ಆರ್ಯ ವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್. ಅರುಣ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಗೋಪಾಲ್ ಯಡಗೆರೆ ನಿರೂಪಿಸಿದರು. ನಾಗರಾಜ್ ನೇರಿಗೆ ಸ್ವಾಗತಿಸಿದರು

LEAVE A REPLY

Please enter your comment!
Please enter your name here