ಅಯೊಧ್ಯೆಯಲ್ಲಿ ಆದಿ ಕವಿ ಮಹರ್ಷಿ ವಾಲ್ಮೀಕಿ ದೇವಸ್ಥಾನ ನಿರ್ಮಾಣಕ್ಕೆ ಮನವಿ

0
158

ರಾಯಚೂರು.ಅ.27- ಉತ್ತರ ಪ್ರದೇಶದ ಅಯೋಧ್ಯದಲ್ಲಿ ರಾಮ ಮಂದಿರದೊಂದಿಗೆ ಆದಿ ಕವಿ ಮಹರ್ಷಿ ವಾಲ್ಮೀಕಿ ದೇವಸ್ಥಾನ ನಿರ್ಮಾಣಕ್ಕೆ ಸಂಸದ ರಾಜಾ ಅಮರೇಶ್ವರ ನಾಯಕ ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಮಹಾಯಜ್ಞೆ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಇದು ಭಾರತೀಯ ಇತಿಹಾಸದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ. ಈ ಹಿನ್ನೆಲೆಯಲ್ಲಿ ರಾಮಾಯಣ ಮೂಲಕ ಶ್ರೀರಾಮನ ಚರಿತ್ರೆಯನ್ನು ಮತ್ತು ಅವರ ಅವತಾರ ಬಗ್ಗೆ ಸಮಾಜಕ್ಕೆ ಪರಿಚಯಿಸಿದ ವಾಲ್ಮೀಕಿ ಮಹರ್ಷಿ ಮಂದಿರ ನಿರ್ಮಿಸುವಂತೆ ಪ್ರಧಾನಮಂತ್ರಿಗಳಲ್ಲಿ ಕೋರಿದ್ದಾರೆ.

ಈ ಕುರಿತು ಪತ್ರವೊಂದನ್ನು ರಾಜಾ ಅಮರೇಶ್ವರ ನಾಯಕ ಅವರು ಅ.26 ರಂದು ಪ್ರಧಾನಮಂತ್ರಿಗಳಿಗೆ ರವಾನೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here