ಸಿದ್ದರಾಮಯ್ಯನವರು ಯಾವ ನಾಯಿ ಎಂದು ಮೊದಲು ತಿಳಿಸಲಿ; ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್

0
185

ಮೈಸೂರು. ನ.01- ಸಿದ್ದರಾಮಯ್ಯನವರು ಯಾವ ನಾಯಿ ಎಂದು ಮೊದಲು ತಿಳಿಸಲಿ. ಜೆಡಿಎಸ್ ಪಕ್ಷದಿಂದ ಬಂದಾಗ ಯಾವ ನಾಯಿಯಾಗಿದ್ದರು. ಕಾಂಗ್ರೆಸ್ ಪಕ್ಷ ಸೋಲಿನ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನದಿಂದ ಬಿ.ಎಸ್.ವೈ ಕೆಳಗಿಳಿದರೆ ಬಿಜೆಪಿ ಸೇರಿದ ಶಾಸಕರದ್ದು ನಾಯಿಪಾಡು’ ಎಂಬ ಸಿದ್ದು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದ್ದಾರೆ.ಅನರ್ಹಗೊಂಡ ಶಾಸಕರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹಗುರವಾಗಿ ಮಾತನಾಡಬಾರದು. ಜೆಡಿಎಸ್ ಪಕ್ಷದಿಂದ ಬಂದಾಗ ಯಾವ ನಾಯಿಯಾಗಿದ್ದರು ತಿಳಿಸಲಿ. ಕಾಂಗ್ರೆಸ್ ಪಕ್ಷ ಸೋಲಿನ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.ಐದು ವರ್ಷ ಆಡಳಿತ ನಡೆಸಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿ 35 ಸಾವಿರ ಅಂತರದಿಂದ ಸೋತು ಬಾದಾಮಿಗೆ ಓಡಿ ಹೋಗಿದ್ದ ಸಿದ್ದು ಯಾವ ನಾಯಿ ಎಂದು ತಿಳಿಸಲಿ. ಇನ್ನೊಬ್ಬರ ಬಗ್ಗೆ ಹಗುರವಾಗಿ ಮಾತನಡುವುದನ್ನ ಸಿದ್ದರಾಮಯ್ಯ ನಿಲ್ಲಿಸಲಿ ಎಂದು ಟೀಕಿಸಿದ್ದಾರೆ.

ಇದೇ ವೇಳೆ, ಈ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವನ್ನು ಎಚ್.ವಿಶ್ವನಾಥ್ ವ್ಯಕ್ತಪಡಿಸಿದರು. ಆರ್ ಆರ್ ನಗರ ಹಾಗೂ ಶಿರಾ ಎರಡು ಕ್ಷೇತ್ರಗಳನ್ನು ಗೆಲ್ಲುತ್ತೇವೆ. ಈ ಚುನಾವಣೆಯಲ್ಲಿ ಗೆದ್ದ ಮೇಲೆ ಕರ್ನಾಟಕದಲ್ಲಿ ಬಿಜೆಪಿ ಬಲಿಷ್ಠವಾಗುತ್ತದೆ. ಯಡಿಯೂರಪ್ಪ ಸರ್ಕಾರಕ್ಕೆ ಜನ ಬೆಂಬಲವಿದೆ ಎಂಬ ಸಂದೇಶ ರವಾನೆ ಆಗುತ್ತದೆ ಎಂದು ಎಂಎಲ್‍ಸಿ ವಿಶ್ವನಾಥ್ ಹೇಳಿದರು.

LEAVE A REPLY

Please enter your comment!
Please enter your name here