ದೀಪಾವಳಿಗೆ ಪಟಾಕಿ ಸಿಡಿಸಲು ಸರ್ಕಾರದಿಂದ ಗ್ರೀನ್ ಸಿಗ್ನಲ್.

0
194

ಬೆಂಗಳೂರು.ನ.7: : ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಬೇಕೆಂದುಕೊಂಡವರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಹಬ್ಬಕ್ಕೆ ಹಸಿರು ಪಟಾಕಿ ಒಡೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ.

ಕೊರೊನಾ ಹಿನ್ನಲೆಯಲ್ಲಿ ಪಟಾಕಿ ಸಿಡಿಸುವುದು ಸೂಕ್ತವಲ್ಲ. ಸೋಂಕಿತರು, ಕೊರೊನಾದಿಂದ ಗುಣಮುಖರಾದವರು, ಇವರ ಆರೋಗ್ಯ ದೃಷ್ಟಿಯಿಂದ ಪಟಾಕಿ ನಿಷೇಧಿಸುವಂತೆ  ಬಿಬಿಎಂಪಿ , ಆರೋಗ್ಯ ಇಲಾಖೆ ಸರ್ಕಾರದ ಬಳಿ ಮನವಿ ಮಾಡಿದೆ.

ಆದರೆ ಸರ್ಕಾರ ಪಟಾಕಿ ಸಿಡಿಸಲು ಅನುಮತಿ ನೀಡಿದ್ದು, ಪಟಾಕಿ ಸಿಡಿಸೋ ಬಗ್ಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹಾಗೇ ದೀಪಾವಳಿಗೆ ಹಸಿರು ಪಟಾಕಿ ಬಳಸಲು ಮನವಿ ಮಾಡಲಾಗಿದೆ.

LEAVE A REPLY

Please enter your comment!
Please enter your name here