ತೆಲಂಗಾಣ ದಲ್ಲಿ ಬಿಜೆಪಿಗೆ ಹಿಮ್ಮೆಟ್ಟಲು ಕೆ ಸಿ ಆರ್ ರಣತಂತ್ರ.

ಬಿಜೆಪಿ ಸೋಲಿಸಲು ಕೆಸಿಆರ್ ಪ್ಲಾನ್

0
234

ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ  ಕಾರಣ ಎಚ್ಚೆತ್್ತತ ಕೊಂಡ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಬಿಜೆಪಿಯನ್ನು ಸೋಲಿಸಲು ಪ್ರಾದೇಶಿಕ ಪಕ್ಷಗಳನ್ನು ಸೇರಿಸಿ ಒಕ್ಕೂಟ ರಚಿಸಲು ಮುಂದಾಗಿದ್ದಾರೆ.

ದೇಶದ ವಿವಿಧ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ಮುಖಂಡರನ್ನು ಒಂದೇ ವೇದಿಕೆಗೆ ತಂದು, ಬಿಜೆಪಿಯನ್ನು ಹಿಮ್ಮೆಟ್ಟಿಸುವ ಪ್ರಯತ್ನಕ್ಕೆ ಅವರು ಕೈಹಾಕಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಡಿಸೆಂಬರ್ ನಲ್ಲಿ ಈ ಸಂಬಂಧ ತೆಲಂಗಾಣದಲ್ಲಿ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಎನ್ ಸಿಪಿ ನಾಯಕ ಶರದ್ ಯಾದವ್, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಜೆಡಿಎಸ್ ನಾಯಕ ಕುಮಾರಸ್ವಾಮಿ, ಎಸ್ ಪಿ ನಾಯಕ ಅಖಿಲೇಶ್ ಯಾದವ್, ಬಿಎಸ್ಪಿ ನಾಯಕಿ ಮಾಯಾವತಿ ಸೇರಿದಂತೆ ಎಲ್ಲಾ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ಪ್ರಮುಖರನ್ನು ಈ ಸಭೆಗೆ ಆಹ್ವಾನಿಸುವ ಸಾಧ್ಯತೆ ಇದೆ.

ಆದರೆ ಈ ಸಭೆಯಲ್ಲಿ ಯಾರೆಲ್ಲಾ ಭಾಗವಹಿಸಲಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here