ಸಿದ್ದರಾಮಯ್ಯ ಅವರು ತನ್ವಿರ್ ಸೆಠ್ ಅವರನ್ನು ರಾಜಕೀಯವಾಗಿ ಮುಗ್ಗಿಸುವ ಷಡ್ಯಂತ್ರ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟಿಸಿದ ಘಟನೆ.
ರಾಯಚೂರು. ಮಾ.2- ಮುಸ್ಲಿಂ ನಾಯಕರನ್ನು ರಾಜಕೀಯವಾಗಿ ತುಳಿಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖಂಡಿಸಿ ಮುಸ್ಲಿಂ ಸಮುದಾಯದವರು ಸಿದ್ದರಾಮಯ್ಯ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟಿಸಿದ ಘಟನೆ ಇಂದು ನಡೆಯಿತು.
ನಗರ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟಿಸುತ್ತಾ ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ಕೆಲವು ವರ್ಷಗಳಿಂದ ಮುಸ್ಲಿಂ ನಾಯಕರನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆಯುತ್ತಿದೆ.
ಮೈಸೂರು ಮೇಯರ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಯಿಂದ ಅಧಿಕಾರ ಪಡೆಯುವ ಹಿನ್ನೆಲೆಯಲ್ಲಿ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಅನಗತ್ಯವಾಗಿ ತೊಂದರೆ ನೀಡಿದ್ದರೆ.ಜಾತ್ಯತೀತ ಪಕ್ಷಗಳು ಮೈತ್ರಿ ಸಾಧಿಸಿ ಬಿಜೆಪಿಯನ್ನು ಅಧಿಕಾರದಿಂದ ದೂರ ಮಾಡುವ ಉದ್ದೇಶದಿಂದ ತನ್ವಿರ್ ಸೆಠ್ ಕೆಲಸ ಮಾಡಿದ್ದಾರೆ ಆದರೆ ಸಿದ್ದರಾಮಯ್ಯ ಅವರು ತನ್ವಿರ್ ಸೆಠ್ ಅವರನ್ನು ರಾಜಕೀಯವಾಗಿ ಮುಗ್ಗಿಸುವ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಹ್ಮದ್ ಹನೀಫ್, ಹುಸೇನ್ ಭಾಷಾ,ಜಮೀರ್, ಮೊಹಮದ್ ರಾಜಿಯ,ಮೌಸಿನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.