ಪ್ರೌಡಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕ: ರಾಜಾ ವೆಂಕಟಪ್ಪ ನಾಯಕ
ಮಾನ್ವಿ: ವಿದ್ಯಾರ್ಥಿಗಳಿಗೆ ಶಿಕ್ಷಕರ ಕೊರತೆ ಯಾಗದಂತೆ ತಾ. ಪ್ರೌಡಶಾಲೆಗಳಿಗೆ ೬೦ ಅತಿಥಿ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ತಿಳಿಸಿದರು
ತಾಲ್ಲೂಕಿನ ಪೋತ್ನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆ.ಕೆ.ಅ.ಆರ್.ಡಿ.ಯೋಜನೆ ಅಡಿಯಲ್ಲಿ ನಿರ್ಮಿಸಿದ ನೂತನ ೧೦ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು
ಶಿಕ್ಷಣದಿಂದ ಮಾತ್ರ ಸಮಾನತೆಯನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಗಂಗಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡ್ಯಾಳ್, ಮುಖಂಡರಾದ ರಾಜಾ ರಾಮಚಂದ್ರನಾಯಕ,ಮುಖ್ಯಗುರು ಕೃಷ್ಣಪ್ಪ, ಮುಖಂಡರಾದ ಖಲೀಲ ಖುರೇಷಿ,ಗೋಪಾಲನಾಯಕ, ಪಿ.ಡಿ.ಒ.ಚನ್ನರೆಡ್ಡಿ ಶಾಲೆಯ ಶಿಕ್ಷಕರು,ವಿದ್ಯಾರ್ಥಿಗಳು, ಸೇರಿದಂತೆ ಇನ್ನಿತರರು ಇದ್ದರು