ಬೆಂಗಳೂರು: ಶಿಫಾರಸ್ಸು ಪತ್ರದ ಮೂಲಕ ವರ್ಗಾವಣೆ ಬಯಸುವ ಸರ್ಕಾರಿ ನೌಕರರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.
ಅಧಿಕಾರಿಗಳ ವರ್ಗಾವಣೆಗೆ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ನೀಡುವ ಶಿಫಾರಸ್ಸು ಪತ್ರವೇ ಕಾನೂನು ಬಾಹಿರ ಎಂದು ಹೇಳಿದೆ.
ಈ ಬಗ್ಗೆ ಎಂಜಿನಿಯರ್ ಕೆಎಂ ವಾಸು ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ಆದೇಶ ಹೊರಡಿಸಿದೆ. ಹಾಗಾಗಿ ಇನ್ನು ಮುಂದೆ ವರ್ಗಾವಣೆಗಾಗಿ ಚುನಾಯಿತ ಪ್ರತಿನಿಧಿಗಳ ಮನೆಯ ಮುಂದೆ ಕಾಯುವ ಅಗತ್ಯವಿಲ್ಲ.!