ರಾಯಚೂರಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವಿಶ್ವಮಾನವ ದಿನಾಚರಣೆ;

0
519
ರಾಯಚೂರು,ಡಿ.28.- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಡಿ.29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವಿಶ್ವಮಾನವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಉದ್ಘಾಟಿಸುವರು. ವಿಧಾನಸಭೆ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಆದಿಮನಿ ವೀರಲಕ್ಷ್ಮೀ, ಲೋಕಸಭೆ ಸಂಸದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ವಿಧಾನ ಪರಿಷತ್ ಶಾಸಕ ಎನ್.ಎಸ್. ಭೋಸರಾಜು, ವಿಧಾನ ಸಭೆ ಶಾಸಕ ಕೆ. ಶಿವನಗೌಡ ನಾಯಕ, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಶಾಸಕ ಶರಣಪ್ಪ ಮಟ್ಟೂರು, ಬಸವರಾಜ ಪಾಟೀಲ್ ಇಟಗಿ, ವಿಧಾನ ಸಭೆ ಶಾಸಕ ಡಿ.ಎಸ್. ಹೂಲಗೇರಿ, ರಾಜಾ ವೆಂಕಟಪ್ಪ ನಾಯಕ, ಬಸವನಗೌಡ ದದ್ದಲ್, ವಿಧಾನ ಪರಿಷತ್ ಶಾಸಕ ಡಾ. ಚಂದ್ರಶೇಖರ ಪಾಟೀಲ್, ಮುನಿರಾಬಾದ್ ತುಂಗಭದ್ರ ಕಾಡಾ ಅಧ್ಯಕ್ಷರಾದ ಬಸವನಗೌಡ ತುರ್ವಿಹಾಳ್, ತಾಲೂಕ ಪಂಚಾಯತ್ ಅಧ್ಯಕ್ಷೆ ಜಯಮ್ಮ ಕೆ. ನರಸಣ್ಣಾಚಾರಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ವಿಶೇಷ ಅಹ್ವಾನಿತರಾಗಿ ಕರ್ನಾಟಕ ಸರ್ಕಾರದ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಹನುಮನಗೌಡ ಬೆಳಗುರ್ಕಿ ಅವರು ಆಗಮಿಸುವರು.
ಎ.ಎಂ.ಇ. ಕಾಲೇಜ್ ಉಪನ್ಯಾಸಕರಾದ ರಾಜಶ್ರೀ ಕಲ್ಲೂರಕರ್  ಉಪನ್ಯಾಸಕರಾಗಿ ಆಗಮಿಸುವರು.

LEAVE A REPLY

Please enter your comment!
Please enter your name here