ಸಾಹಿತಿ ಚಿದಾನಂದಮೂರ್ತಿ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಬೆಳಗ್ಗೆ 9 ಗಂಟೆ ಬಳಿಕ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆರ್ಪಿಸಿ ಲೇಔಟ್ನಲ್ಲಿ ಚಿಂದಾನಂದಮೂರ್ತಿಯವರ ಮನೆ ಇದೆ
ಬೆಂಗಳೂರು(ಜ.11): ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ.ಚಿದಾನಂದಮೂರ್ತಿ ಇಂದು ಮುಂಜಾನೆ 4 ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ.
ಸಾಹಿತ್ಯ, ಸಂಶೋಧನೆ ಮತ್ತು ಇತಿಹಾಸ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಚಿದಾನಂದಮೂರ್ತಿಯವರಿಗೆ ರಾಜ್ಯೋತ್ಸವ ಸೇರಿ ಹಲವು ಪ್ರಶಸ್ತಿಗಳು ಲಭಿಸಿವೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಬೇಕೆಂದು ಹೋರಾಟ ಮಾಡಿದವರಲ್ಲಿ ಚಿಮೂ ಪ್ರಮುಖರು. ಹಂಪಿ ಸ್ಮಾರಕಗಳ ರಕ್ಷಣೆಗಾಗಿ ಚಿದಾನಂದಮೂರ್ತಿ ನಿರಂತರ ಹೋರಾಟ ಮಾಡಿದ್ದರು. ಸಂಶೋಧಕರಾಗಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಪ್ರಾಧ್ಯಾಪಕರಾಗಿಯೂ ಚಿಮೂ ಸೇವೆ ಸಲ್ಲಿಸಿದ್ದರು.