ಜನಗಣತಿ ಕಾರ್ಯವನ್ನು ಸುಸೂತ್ರವಾಗಿ ನಿರ್ವಹಿಸಲು ಅಪರ ಜಿಲ್ಲಾಧಿಕಾರಿ ದುರುಗೇಶ್ ಕರೆ

0
254
ಜನಗಣತಿ ಸಭೆ ಉದ್ಘಾಟನೆ

ರಾಯಚೂರು,ಫೆ.27. – ಪ್ರತಿ ಹತ್ತು ವರ್ಷಗಳಿಗೊಮ್ಮೆ ನಡೆಯುವ ಜನಗಣತಿ ಕಾರ್ಯವನ್ನು ಯಾವುದೇ ಸಮಸ್ಯೆ ಬಾರದಂತೆ ಸುಸೂತ್ರವಾಗಿ ನಿರ್ವಹಿಸಲು ಜನಗಣತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಸಂಬಧಿಸಿದವರು ಆಸಕ್ತಿಯಿಂದ ತರಬೇತಿಯಲ್ಲಿ ನೀಡುವ ಎಲ್ಲಾ ಅಂಶಗಳನ್ನು ಮನನ ಮಾಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ದುರುಗೇಶ್ ಅವರು ಸೂಚಿಸಿದರು.
ಅವರು ಫೆ.27ರ ಗುರುವಾರ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ 2021ರ ಜನಗಣತಿಯ ಎಲ್ಲಾ ಚಾರ್ಜ್ ಅಧಿಕಾರಿಗಳು, ಸಹಾಯಕ ಚಾರ್ಜ್ ಅಧಿಕಾರಿಗಳು ಹಾಗೂ ತಾಂತ್ರಿಕ ಸಹಾಯಕರಿಗೆ ಹಮ್ಮಿಕೊಳ್ಳಲಾಗಿದ್ದ ಜನಗಣತಿ ತರಬೇತಿ ಕಾರ್ಯಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಮಟ್ಟದಲ್ಲಿ ನಿಗಧಿಪಡಿಸಿದ ವೇಳಪಟ್ಟಿಯಂತೆ ಫೆ.27,28 ರಂದು ಸಂಬಂಧಿಸಿದ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ. ಜನಗಣತಿ ವೇಳೆ ಸಾಕಷ್ಟು ಸಮಸ್ಯೆಗಳು ಎದುರಾಗಬಹುದು ಅವುಗಳನ್ನು ಮೆಟ್ಟಿನಿಲ್ಲಲು ಈ ತರಬೇತಿ ನೆರವಾಗುತ್ತದೆ ಈ ನಿಟ್ಟಿನಲ್ಲಿ ತರಬೇತಿದಾರರು ತಿಳಿಸುವ ಎಲ್ಲಾ ಅಂಶಗಳನ್ನು ಉತ್ತಮವಾಗಿ ಮನನ ಮಾಡಿಕೊಳ್ಳಬೇಕು.
ಜನಗಣತಿ ಕೈಗೊಳ್ಳುವ ಕುರಿತು ನೀಡಲಾಗಿರುವ ಮೂರು ಪುಸ್ತಕಗಳನ್ನು ಆಳವಾಗಿ ಅಧ್ಯಯನ ಮಾಡಿಕೊಳ್ಳಬೇಕು. ಚಾರ್ಜ್ ಅಧಿಕಾರಿಗಳು ಪುಸ್ತಕದ ಸಂಪೂರ್ಣ ವಿವರಗಳನ್ನು ಅರಿತುಕೊಳ್ಳಬೇಕು. ಮನೆ ಭೇಟಿ ವೇಳೆ ಹೇಗೆ ಮಾಹಿತಿ ಸಂಗ್ರಹಿಸಬೇಕು ಎಂಬುದನ್ನು ಮೊದಲ ಹಂತದಲ್ಲಿ ಹಾಗೂ ಎರಡನೇ ಹಂತದಲ್ಲಿ ಮನೆಪಟ್ಟಿ ಹಾಗೂ ಮೊಬೈಲ್ ಆ್ಯಪ್‌ಗಳ ಮೂಲಕ ಹೇಗೆ ಮಾಹಿತಿ ಸಂಗ್ರಹಿಸಬೇಕು ಎಂಬುದನ್ನು ಇಲ್ಲಿ ತಿಳಿಸಿಕೊಡಲಾಗುವದು ಎಂದರು.

ಜನಗಣತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ ನಗರ ಪ್ರದೇಶಗಳಲ್ಲಿ ಅದರ ಸಭೆ ಪಟ್ಟಣ ಪಂಚಾಯತ್ ಗಳು ಹಾಗೂ ಗ್ರಾಮೀಣ ಮಟ್ಟದಲ್ಲಿ ತಹಶೀಲ್ದಾರರು ಜನಗಣತಿಗೆ ಕೈಗೊಳ್ಳಬೇಕಾದ ಮಾರ್ಗಸೂಚಿಗಳನ್ನು ತರಬೇತಿಯಲ್ಲಿ ತಿಳಿಸಲಾಗುವದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜನಗಣತಿ ಕುರಿತು ಜಾಗೃತಿ ಮೂಡಿಸಬೇಕು ಅಲ್ಲದೇ ಜನಗಣತಿದಾರರನ್ನು ನೇಮಕ ವಾಗುವದು ಅವರ ಇಲಾಖೆಯಿಂದಲೇ ಎನ್‌ಐಸಿಯಿಂದ ಜನಗಣತಿ ಮಾಹಿತಿಯನ್ನು ಪ್ರಚಾರ ಮಾಡುತ್ತಾರೆ. ತರಬೇತಿಗೆ ಬಂದಿರುವವರು ಕಡ್ಡಾಯವಾಗಿ ಜನಗಣತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿ ತಿಳಿದುಕೊಳ್ಳಬೇಕು ಯಾವುದೇ ಅನುಮಾನವಿಟ್ಟುಕೊಂಡು ಹಿಂದುರುಗಬಾರದು ಜನಗಣತಿ ಕಾರ್ಯ ಜಿಲ್ಲೆಯಲ್ಲಿ ಉತ್ತಮವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಂಬAಧಿಸಿದ ಇಲಾಖೆಗಳು ಅದಕ್ಕೆಂದೇ ತಮ್ಮ ಕಚೇರಿಯಲ್ಲಿ ಪ್ರತ್ಯೇಕ ಶಾಖೆಯನ್ನು ತೆರೆಯುವಂತೆ ಈಗಾಗಲೇ ಹಲವು ಬಾರಿ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಲಿಂಗಸೂಗೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಜನಗಣತಿ ಕಾರ್ಯದ ಹೆಚ್ಚುವರಿ ಚಾರ್ಜ್ ಅಧಿಕಾರಿ ರಾಜಶೇಖರ್ ಡಂಬಳ, ಎನ್‌ಐಸಿ ಅಧಿಕಾರಿ ರವಿಶಂಕರ್, ಜಿಲ್ಲಾ ನಗರಾಭಿವೃದ್ಧಿ ಕೋಶದ
ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಜನಗಣತಿ ತರಬೇತಿದಾರ ಹಾಗೂ ರಾಯಚೂರು ನೋಡಲ್
ಅಧಿಕಾರಿ ಮುರಾರಿ ಸತ್ಯಬಾಬು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಹೆಚ್. ಗೋನಾಳ್,
ಅಧಿಕಾರಿಗಳಾದ ಟಿ.ಕೆ. ಶ್ರೀಧರ್ ವೇದಿಕೆಯಲ್ಲಿದ್ದರು.
ಹೆಚ್ಚುವರಿ ಚಾರ್ಜ್ ಅಧಿಕಾರಿಗಳು, ತಾಂತ್ರಿಕ ಸಹಾಯಕರು, ಚಾರ್ಜ್ ಅಧಿಕಾರಿಗಳು, ಇನ್ನಿತರರು
ಇದ್ದರು. ವಿದ್ಯಾರ್ಥಿಯಾದ ಶಿವಾನಂದ ಪ್ರಾರ್ಥಿಸಿದರು. ಜಿಲ್ಲಾ ಜನಸಂಖ್ಯೆ ತರಬೇತಿ ಅಧಿಕಾರಿಯಾದ
ಸದಾಶಿವಪ್ಪ ಸ್ವಾಗತಿಸಿದರು.

LEAVE A REPLY

Please enter your comment!
Please enter your name here