ಬೆಂಗಳೂರು: ವಿಶ್ವ ಬ್ಯಾಂಕ್ ಹಾಗೂ ಏಷ್ಯಾ ಮೂಲಸೌಕರ್ಯ ಹೂಡಿಕೆ ಬ್ಯಾಂಕ್ ನೆರವಿನಿಂದ ದೇಶದಲ್ಲಿ ಅಣೆಕಟ್ಟೆ ಪುನರ್ವಸತಿ ಮತ್ತು ಸುಧಾರಣೆ ಯೋಜನೆಯ 2 ಮತ್ತು 3ನೇ ಹಂತದ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಈ ಯೋಜನೆಯಿಂದ ರಾಜ್ಯಕ್ಕೆ ಅನುಕೂಲವಾಗಲಿದೆ. ರಾಜ್ಯದಲ್ಲಿ ಜಲ ಸಂಪನ್ಮೂಲ ಇಲಾಖೆಯಿಂದ ಡಿ.ಆರ್.ಐ.ಪಿ ನೀರಾವರಿ ಯೋಜನೆ ಜಾರಿಯಲ್ಲಿದ್ದು, ಕೇಂದ್ರದ ಈ ಕ್ರಮದಿಂದ ಅಣೆಕಟ್ಟೆಯ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
Government of Karnataka welcomes the approval of Dam Rehabilitation and Improvement Project (DRIP) Phase II and Phase III, by Government of India today. (1/2)
— CM of Karnataka (@CMofKarnataka) October 29, 2020
Keeping in view the experience of Karnataka Water Resources Department in the ongoing DRIP, we can say confidently that, the new Scheme will be a catalyst in bringing changes in dam safety culture in India. (2/2) @PMOIndia @MoJSDoWRRDGR, @gssjodhpur, @cpmu_drip
— CM of Karnataka (@CMofKarnataka) October 29, 2020
ಬರುವ 2021ರಿಂದ 2031ರ ಅವಧಿಯಲ್ಲಿ ಈ ಎರಡೂ ಹಂತಗಳ ಯೋಜನೆಗಳನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ 10,211 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ. ಈ ಪೈಕಿ ಬ್ಯಾಂಕ್ ಗಳು 7 ಸಾವಿರ ಕೋಟಿ ರೂಪಾಯಿ ನೆರವು ನೀಡಲಿದ್ದು, ಅಣೆಕಟ್ಟೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿ, ಅಣೆಕಟ್ಟೆಗಳ ಕಾರ್ಯಾಚರಣೆಯನ್ನು ವೃದ್ಧಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದಿದ್ದಾರೆ.