WPI ಯಿಂದ “ರೈತ ಭದ್ರತೆ ದೇಶದ ಸುಭದ್ರತೆ* ಜನ ಜಾಗೃತಿ ಅಭಿಯಾನ

0
490

ರಾಯಚೂರು: ವೆಲ್ಫೇರ್ ಪಾರ್ಟಿ ಯಿಂದ ರೈತರ ಪರವಾಗಿ ಜನಜಾಗೃತಿ ಅಭಿಯಾನ ಪ್ರಾರಂಭವಾಗಿದ್ದು ರಾಯಚೂರು ಜಿಲ್ಲೆಯ ವಿವಿಧ ತಾಲೂಕು ಮತ್ತು ಹಳ್ಳಿಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡರು ಅಬ್ದುಲ್ ಲತೀಫ್ ತಿಳಿಸಿದರು.

ಅವರು ರಾಯಚೂರಿನ ಪತ್ರಿಕಾ ಭವನದಲ್ಲಿ ಮಾತನಾಡುತ್ತಾ ಭಾರತದ ಕೃಷಿಯು ಅನೇಕ ಬಿಕ್ಕಟ್ಟು ಗಳನ್ನು ಎದರುಸುತ್ತಿದೆ. ಇಂದು ರೈತರು ಬೆಳೆದ ಬೆಳೆಗಳಿಗೆ ಸೂಕ್ತ ನಿಗದಿತ ಬೆಲೆ ಮತ್ತು ಮಾರುಕಟ್ಟೆ ಇಲ್ಲ, ನೀರಾವರಿ ಸೌಲಭ್ಯ, ಬೀತ್ತನೆ ಬೀಜ, ರಸಗೊಬ್ಬರ, ವಿದ್ಯುತ್ ಪೂರೈಕೆ, ದಾಸ್ತಾನು ಕೊಠಡಿ, ಸಾಲ ಸೌಲಭ್ಯ, ತಂತ್ರಜ್ಞಾನ ಗಳು ಸರಿಯಾಗಿ ಸಿಗದ ಪರಿಣಾಮ ರೈತ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ ಮುಂದುವರಿದು ಅಸಂಖ್ಯಾತ ರೈತ ಮತ್ತು ಕೃಷಿ ಕೂಲಿಕಾರರು ಕೃಷಿಯಿಂದ ದೂರವಾಗಿ ಹೊಟ್ಟೆಪಾಡಿಗಾಗಿ ಹಳ್ಳಿಯಿಂದ ನಗರಗಳಿಗೆ ವಲಸೆ ಹೊರಡುತ್ತಿದ್ದಾರೆ ಇದರ ಬಗ್ಗೆ ಗಮನ ಹರಿಸಬೇಕಾದ ನಮ್ಮ ಸರ್ಕಾರಗಳು ತಮ್ಮ ಜವಾಬ್ದಾರಿಯನ್ನು ಮರೆತಿವೆ.

BJP ನೇತೃತ್ವದ ಕೇಂದ್ರ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳು ಮೂರು ಮಹತ್ವದ ರೈತ ಮತ್ತು ಜನ ವಿರೋಧಿ ಕಾಯಿದೆಗಳನ್ನು ಜಾರಿ ಮಾಡಲು ಹೊರಟಿದೆ. ಈ ಕಾಯಿದೆಗಳು ಜಾರಿಯಾದರೆ ದೇಶದ ಕೃಷಿ ದಿವಾಳಿಯಾಗಿ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ತಿದ್ದುಪಡಿಗೆ ಒಳಗಾದ ಮೂರು ಕಾಯಿದೆಗಳಾದ ಭೂ ಸುಧಾರಣೆ ತಿದ್ದುಪಡಿ ಕಾಯಿದೆ, ಕೃಷಿ ಉತ್ಪನ್ನ ಮತ್ತು ಸರಕು ಸೇವೆಗಳ ಮಾರಾಟ ಕಾಯಿದೆ ( APMC ) ಮತ್ತು ವಿದ್ಯುಚ್ಛಕ್ತಿ ತಿದ್ದುಪಡಿ ಕಾಯಿದೆಗಳು ರೈತರಿಗೆ ಮಾರಕವಾಗಿ ಕೃಷಿಯನ್ನು ನಾಶಗೊಳಿಸಿ‌ ಅಂಬಾನಿ, ಆದಾನಿ ಸೇರಿದಂತೆ ಇತರ ಕಾರ್ಪೊರೇಟ್ ಸಂಸ್ಥೆಗಳ ಮುಖ್ಯಸ್ಥರಿಗೆ ಕೃಷಿಯನ್ನು ಒಪ್ಪಿಸಲಿವೆ. ಕಾರ್ಪೊರೇಟ್ ಮತ್ತು ಬಂಡವಾಳಶಾಹಿಯ ಪರ ಇರುವ ರೈತ ಮತ್ತು ಜನ ವಿರೋಧಿ ಮೋದಿ ನೇತೃತ್ವದ ಭಾಜಪ ಸರ್ಕಾರ ಬಂಡವಾಳಶಾಹಿಗಳ ಹಿತ ಕಾಯಲು ಮುಂದಾಗಿದೆ. ಇಂತಹ ಸೂಕ್ಷ್ಮತೆ ಯನ್ನು ಅರಿತುಕೊಂಡು ನಾವುಗಳು ಅನ್ನದಾತರ ಜೊತೆಗೆ ನಿಲ್ಲಬೇಕಿದೆ ಹಾಗೂ ರೈತ, ಕಾರ್ಮಿಕ, ದಲಿತ, ಅಲ್ಪಸಂಖ್ಯಾತ, ಮಹಿಳಾ ಮತ್ತು ಜನ ವಿರೋಧಿ ಸರ್ಕಾರಕ್ಕೆ ತಕ್ಕದಾದ ಪಾಠ ಕಲಿಸಿ ದೇಶವನ್ನು ಉಳಿಸಿಕೊಳ್ಳಬೇಕಿದೆ. ರೈತರ ಜೊತೆಗೆ ನಿಲ್ಲುವುದೆಂದರೆ ದೇಶದ ಜೊತೆಗೆ ನಿಂತಂತೆ ನಾವು ರೈತರೊಂದಿಗೆ ನಿಲ್ಲೋಣ

ದೆಹಲಿ ಯಲ್ಲಿ ‌ಪಂಜಾಬ್,ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ ಸೇರಿ ದೇಶದ ಇತರೆ ರಾಜ್ಯ ಗಳ ರೈತರು ಮಾಡುತ್ತಿರುವ ಹೋರಾಟವು ದೇಶದ ಉಳಿವಿಗಾಗಿ ಮತ್ತು ಆಹಾರದ ಭದ್ರತೆಗಾಗಿ ಮಾಡುತ್ತಿರುವ ಹೋರಾಟವಾಗಿದೆ ಈ ಹೋರಾಟಕ್ಕೆ ಇನ್ನಷ್ಟು ಶಕ್ತಿಯನ್ನು ತುಂಬುವುದಕ್ಕಾಗಿ ಹಾಗೂ ಕೃಷಿ ಸಂಬಂಧಿಸಿದ ಕಾಯಿಗಳಿಗೆ ಮಾಡಲಾದ ತಿದ್ದುಪಡಿಗಳಿಂದಾಗಿ ರೈತರಿಗೆ, ಕೃಷಿಗೆ ಆಗುವ ನಷ್ಟವನ್ನು ಕುರಿತಂತೆ ರಾಜ್ಯದಲ್ಲಿ ಜನ ಜಾಗೃತಿಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ( WPI ) ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಜನವರಿ 08 ರಿಂದ 15 ರವರೆಗೆ ಒಂದು ವಾರಗಳ ವರೆಗೆ ರಾಜ್ಯವ್ಯಾಪಿ‌ ಜನತೆಯೊಂದಿಗೆ ಚರ್ಚೆ, ಸಂವಾದ, ಹೋರಾಟ, ಪ್ರತಿಭಟನಾ ಮೆರವಣಿಗೆ, ಜನಪ್ರತಿನಿಧಿಗಳ ( MP, MLA ) ಕಾರ್ಯಾಲಯ / ಮನೆಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಮಾಡುತ್ತಿದೆ. ದೇಶ ಉಳಿಸುವ ಅನ್ನದಾತರ ಪರವಾದ ಹೋರಾಟಕ್ಕೆ ರಾಜ್ಯದ ಪ್ರಜ್ಞಾವಂತ ಜನತೆ, ವಿದ್ಯಾರ್ಥಿ, ಯುವಜನರು ಸೇರಿ ಪ್ರಗತಿಪರ ಸಂಘಟನೆಗಳು ಜೊತೆಯಾಗಬೇಕೆಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಪೋಸ್ಟರ್ ಬಿಡುಗಡೆ ಮಾಡಲಾಯಿತು

ಪಕ್ಷದ ಜಿಲ್ಲಾಧ್ಯಕ್ಷ ಫರೀದ್ ಉಮರಿ, ಫಾರೂಕ್ ಮನಿಯಾರ್, ಹಾಗೂ ಅಬ್ದುಲ್ ಹನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here