ದೇವರಾಜ (20), ಆಂಜನೇಯ (18) ಮೃತದುರ್ದೈವಿಗಳು.
ನಿಂತಿದ್ದ ನೀರಿನ ಟ್ಯಾಂಕರ್ಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ನಡೆದಿದೆ. ದೇವರಾಜ (20), ಆಂಜನೇಯ (18) ಮೃತದುರ್ದೈವಿಗಳು.
ಮೃತರಿಬ್ಬರೂ ಹಾಗೂ ನಾಗರಾಜ್ ಸೇರಿ ಮೂವರೂ ಅರಕೇರಾ ಗ್ರಾಮಕ್ಕೆ ಬಂದಿದ್ದು, ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ನಿಂತಿದ್ದ ನೀರಿನ ಟ್ಯಾಂಕರ್ಗೆ ಬೈಕನ್ನು ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟರೆ ನಾಗರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ರಿಮ್ಸ್ಗೆ ದಾಖಲಿಸಲಾಗಿದೆ. ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.