ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಮಾ .12ರವರೆಗೆ ಅಮಾನತು.

ಒಂದು ರಾಷ್ಟ್ರ ಒಂದು ಚುನಾವಣೆ ವಿಷಯವಾಗಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಷಯ ಪ್ರಸ್ತಾಪನೆ ಮಡುತ್ತಿದ್ದಾಗ ಸಂಗಮೇಶ್ ತಮ್ಮ ಶರ್ಟ್ ಬಿಚ್ಚಿ ಅನುಚಿತವಾಗಿ ವರ್ತನೆ ಮಾಡಿದ್ದರು.

0
140

ಬೆಂಗಳೂರು, ಮಾ.4- ಸದನದಲ್ಲಿ ದುರ್ವತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರನ್ನು ಒಂದು ವಾರ ಅಮಾನತು ಪಡಿಸಲಾಗಿದೆ. ಒಂದು ರಾಷ್ಟ್ರ ಒಂದು ಚುನಾವಣೆ ವಿಷಯವಾಗಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಷಯ ಪ್ರಸ್ತಾಪನೆ ಮಡುತ್ತಿದ್ದಾಗ ಸಂಗಮೇಶ್ ತಮ್ಮ ಶರ್ಟ್ ಬಿಚ್ಚಿ ಅನುಚಿತವಾಗಿ ವರ್ತನೆ ಮಾಡಿದ್ದರು. ಇದರಿಂದ ಸದನವನ್ನು 15 ನಿಮಿಷಗಳ ಕಾಲ ಮುಂದೂಡಲಾಗಿತ್ತು.

ಬಳಿಕ ಸದನ ಸಮಾವೇಶಗೊಂಡಾಗ ಸಭಾಧ್ಯಕ್ಷ ಕಾಗೇರಿ ಅವರು ಸಂಗಮೇಶ್ ಅಶಿಸ್ತು ತೋರಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಪ್ರಸ್ತಾವನೆ ಮಂಡಿಸುವಂತೆ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಸೂಚಿಸಿದರು.

ಆಗ ಸ್ಪೀಕರ್ ಕಾಗೇರಿ ಅವರು ಇಂದಿನಿಂದ ಜಾರಿಯಾಗುವಂತೆ ಮಾ.12ರವರೆಗೆ ಸಂಗಮೇಶ್ ಅವರನ್ನು ಅಮಾನತು ಮಾಡಿರುವುದಾಗಿ ಪ್ರಕಟಿಸಿದರು.

LEAVE A REPLY

Please enter your comment!
Please enter your name here