ಪ್ರಗತಿ ಕಾಲೇಜಿನ ವಿದ್ಯಾರ್ಥಿನಿ ಈರಮ್ಮ ವಿಭಾಗ ಮಟ್ಟದ ಚರ್ಚಾ ಸ್ಪರ್ಧೆಗೆ ಆಯ್ಕೆ. 

ಮಾನ್ವಿ ತಾಲೂಕಿನಲ್ಲಿ ಪ್ರಗತಿ ಕಾಲೇಜಿನ ವಿದ್ಯಾರ್ಥಿಗಳು ಹೊಸ ಹೊಸ ಪ್ರತಿಭೆಗಳನ್ನು ತೋರಿಸುತ್ತಿರುವುದು ಶ್ಲಾಘನೀಯ

0
80

ಪ್ರಗತಿ ಕಾಲೇಜಿನ ವಿದ್ಯಾರ್ಥಿನಿ ಈರಮ್ಮ ವಿಭಾಗ ಮಟ್ಟದ ಚರ್ಚಾ ಸ್ಪರ್ಧೆಗೆ ಆಯ್ಕೆ.

ಮಾನ್ವಿ: ರಾಯಚೂರಿನಲ್ಲಿ ಈಚೆಗೆ ಏರ್ಪಡಿಸಲಾಗಿದ್ದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಚರ್ಚಾ ಸ್ಪರ್ಧೆಯಲ್ಲಿ ಪಟ್ಟಣದ ಪ್ರಗತಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಈರಮ್ಮ ದ್ವಿತೀಯ ಸ್ಥಾನ ಗಳಿಸಿ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಗುರುವಾರ ಪ್ರಗತಿ ಪಿಯು ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಈರಮ್ಮ ಅವರನ್ನು ಸಂಸ್ಥೆಯ ವತಿಯಿಂದ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ನೀಡಿ ಅಭಿನಂದಿಸಲಾಯಿತು. ಬಸವರಡ್ಡಿ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ತಿಪ್ಪಣ್ಣ ಎಂ.ಹೊಸಮನಿ ಬಲ್ಲಟಗಿ, ಪ್ರಾಂಶುಪಾಲ ಬಸವರಾಜ ಭೋಗಾವತಿ, ಉಪ ಪ್ರಾಂಶುಪಾಲೆ ಸುಮಾ ಟಿ.ಹೊಸಮನಿ, ಉಪನ್ಯಾಸಕರಾದ ಮಲ್ಲಮ್ಮ ಪೋತ್ನಾಳ, ಸರೋಜ, ಜಯಲಕ್ಷ್ಮಿ ಪಾಟೀಲ್, ನಾಗರಾಜ ಚಿಮ್ಲಾಪೂರ, ಫಿರೋಜ್ ರಾಜ್ , ರವಿಚಂದ್ರ ಇದ್ದರು.

LEAVE A REPLY

Please enter your comment!
Please enter your name here